ADVERTISEMENT

ಪ್ರಚೋದನಾತ್ಮಕ ಮಾತು ಬಿಡಿ, ಕಾಯ್ದೆ ಮಾಹಿತಿಗೆ ಕೈಪಿಡಿ ಓದಿ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 11:07 IST
Last Updated 21 ಡಿಸೆಂಬರ್ 2019, 11:07 IST
ಪೌರತ್ವ ತಿದ್ದುಪಡಿ ಕಾಯ್ದೆ
ಪೌರತ್ವ ತಿದ್ದುಪಡಿ ಕಾಯ್ದೆ   

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತಂತೆ ವಾಸ್ತವ ಸಂಗತಿಗಳನ್ನು ಜನರಿಗೆ ತಿಳಿಸುವ ಸಲುವಾಗಿ ಬಿಜೆಪಿ ವತಿಯಿಂದ ಶನಿವಾರ ಕೈಪಿಡಿ ಬಿಡುಗಡೆ ಮಾಡಲಾಯಿತು.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಹಿರಿಯ ನಾಯಕ ಸಿ.ಎಂ.ಉದಾಸಿ ಅವರು ಕೈಪಿಡಿ ಬಿಡುಗಡೆ ಮಾಡಿದರು.

ಶಾಸಕ ಯು.ಟಿ.ಖಾದರ್ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದಕ್ಕೆ ಸಚಿವರೂ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡುವುದು ಏಕೆಂದರೆ ಕಾಯ್ದೆಯಲ್ಲಿ ಏನಿದೆ ಎಂದು ತಿಳಿಯದೆ ಇರುವುದಕ್ಕೆ. ಹೀಗಾಗಿ ಕೈಪಿಡಿ ಓದಿಕೊಂಡರೆ ಯಾರೂ ಪ್ರಚೋದನೆ ಮಾತು ಆಡುವುದಕ್ಕೆ ಅಥವಾ ಪ್ರಚೋದನೆಗೆ ಒಳಪಡುವುದಕ್ಕೆ ಸಾಧ್ಯವಿಲ್ಲ ಎಂದರು.

ADVERTISEMENT

ಇದಕ್ಕೆ ಮೊದಲು ಪಕ್ಷದ ಕಚೇರಿಯಲ್ಲಿ ರಾಜ್ಯದ ವಿವಿಧೆಡೆ ಯಿಂದ ಬಂದ ಪಕ್ಷದ ಕಾರ್ಯ ಕರ್ತರಿಗೆ ಕಾಯ್ದೆ ಬಗ್ಗೆ ಕಾರ್ಯಾಗಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.