ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಕೊಡಿಗೇಹಳ್ಳಿಯ ಗುಂಡಾಂಜನೇಯಸ್ವಾಮಿ ದೇವಾಲಯ ದಲ್ಲಿ ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಇದೇ 9ರಂದು ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.
‘ಆಂಜನೇಯ ಸ್ವಾಮಿ ಮೂರ್ತಿಗೆ ವಿಶೇಷ ಅಲಂಕಾರ ಹಾಗೂ ಪೂಜೆ, 1008 ಲೀಟರ್ ಹಾಲಿ ನಿಂದ ಅಭಿಷೇಕ ಹಾಗೂ 1,008 ಕೆಜಿ ವಿವಿಧ ಬಗೆಯ ಹೂವುಗಳಿಂದ ಪುಷ್ಪಾರ್ಚನೆ ನೆರವೇರಿ ಸಲಾಗುವುದು’ ಎಂದು ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 12 ಭಜನಾ ತಂಡಗಳನ್ನು ಆಹ್ವಾನಿಸ ಲಾಗಿದ್ದು, ಬೆಳಗ್ಗೆ 9ರಿಂದ ರಾತ್ರಿ 9 ರವರೆಗೆ ನಿರಂತರವಾಗಿ ಹನುಮ ಮತ್ತು ರಾಮದೇವರ ಕೀರ್ತನೆಯ ಭಜನಾ ಕಾರ್ಯಕ್ರಮ ನಡೆಯಲಿದೆ. ಹನುಮ ವೇಷಧಾರಿ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.