ADVERTISEMENT

ದೊಡ್ಡರಂಗೇಗೌಡರಿಗೆ ಅಭಿನಂದನೆ ಇಂದು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 20:53 IST
Last Updated 24 ಫೆಬ್ರುವರಿ 2021, 20:53 IST

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ ಅವರ ಅಭಿನಂದನಾ ಸಮಾರಂಭವನ್ನು ಗುರುವಾರ (ಫೆ.25) ಹಮ್ಮಿಕೊಳ್ಳಲಾಗಿದೆ ಎಂದು ದಿ ಹನುಮಂತನಗರ ಸಹಕಾರಿ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

‘ದೊಡ್ಡರಂಗೇಗೌಡರು ಬ್ಯಾಂಕ್‌ನ ಸದಸ್ಯರೂ ಆಗಿದ್ದಾರೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ಡಿ.ಜಿ. ಬೋರೇಗೌಡ ಹೇಳಿದ್ದಾರೆ.

ಕೆಂಪೇಗೌಡ ನಗರದಲ್ಲಿರುವ ಉದಯಭಾನು ಕಲಾ ಸಂಘದಲ್ಲಿ ಕಾರ್ಯಕ್ರಮದಲ್ಲಿ ನಡೆಯಲಿದ್ದು, ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.