ADVERTISEMENT

ಹವಾಲಾ ದಂಧೆ; ₹ 28 ಲಕ್ಷ ಜಪ್ತಿ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 0:00 IST
Last Updated 11 ನವೆಂಬರ್ 2020, 0:00 IST
ಜಪ್ತಿ ಮಾಡಲಾದ ಹಣದ ಜೊತೆ ಆರೋಪಿ ಪಂಕಜ್
ಜಪ್ತಿ ಮಾಡಲಾದ ಹಣದ ಜೊತೆ ಆರೋಪಿ ಪಂಕಜ್   

ಬೆಂಗಳೂರು: ಹವಾಲಾ ದಂಧೆಮೂಲಕ ಅಕ್ರಮವಾಗಿ ಹಣ ಬದಲಾವಣೆ ಮಾಡಿ ಸರ್ಕಾರವನ್ನು ವಂಚಿಸುತ್ತಿದ್ದ ಆರೋಪದಡಿ ಪಂಕಜ್ ಪಟೇಲ್ (47) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಉತ್ತರ ಭಾರತದ ಪಂಕಜ್, ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ. ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿರುವ ಮನೆಯೊಂದರಲ್ಲಿ ವಾಸವಿದ್ದ. ಆತನಿಂದ ₹28 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

'ತನ್ನ ಮನೆಯಲ್ಲೇ ಆರೋಪಿ ಹಣ ಸಂಗ್ರಹ ಮಾಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಲಾಯಿತು. ಹಣಕ್ಕೆ ಯಾವುದೇ ದಾಖಲೆಗಳನ್ನು ಆರೋಪಿ ನೀಡಲಿಲ್ಲ. ಹೀಗಾಗಿ, ಹಣವನ್ನು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

'ನಗರದ ಕೆಲ ವ್ಯಾಪಾರಿಗಳು, ಸರ್ಕಾರಕ್ಕೆ ತೆರಿಗೆ ಪಾವತಿ ಮಾಡದೇ ವಂಚಿಸಿದ್ದಾರೆ. ಅದೇ ಕಪ್ಪು ಹಣವನ್ನು ಬದಲಾವಣೆ ಮಾಡಿಕೊಡುವಂತೆ ಪಂಕಜ್‌ಗೆ ನೀಡಿದ್ದರು. ಆತ, ಹವಾಲಾ ದಂಧೆ ಮೂಲಕ ಹಣ ವರ್ಗಾವಣೆ ಮಾಡಿಕೊಡುತ್ತಿದ್ದ. ಈ ದಂಧೆಯಲ್ಲಿ ಮತ್ತಷ್ಟು ಮಂದಿ ಶಾಮೀಲಾಗಿರುವ ಮಾಹಿತಿ ಇದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.