ಬೆಂಗಳೂರು: ಲಾಕ್ಡೌನ್ನಿಂದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ‘ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.
ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ಇದರ ಗುರಿ. ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ತಲಾ 1 ಸಾವಿರ ಮಂದಿಗೆ ಊಟ, ಉಪಾಹಾರ ನೀಡಲಾಗುತ್ತದೆ.
ಸದ್ಯ ರಾಮನಗರ, ಚನ್ನಪಟ್ಟಣ ತಾಲ್ಲೂಕಿನಲ್ಲಿ ದಾಸೋಹ ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದು ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದಾರೆ. ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.