ಮಾಗಡಿ: ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಬೆಂಗಳೂರು ಶಿವಾಜಿನಗರ ಸಂಚಾರ ಠಾಣೆ ಎಎಸ್ಐ ಶ್ರೀನಿವಾಸ್ ಮೂರ್ತಿ (51) ಅವರು ಹೃದಯಾಘಾತದಿಂದಾಗಿ ಭಾನುವಾರ ಬೆಳಿಗ್ಗೆ ನಿಧನರಾದರು.
ಮಾಗಡಿ ತಾಲ್ಲೂಕಿನ ಅಗಲಕೋಟೆ ಹ್ಯಾಂಡ್ ಪೋಸ್ಟ್ ಹನುಮಣ್ಣನ ಪಾಳ್ಯದ ನಿವಾಸಿ ಶ್ರೀನಿವಾಸ್ ಮೂರ್ತಿ, ಅಗ್ರಹಾರ ದಾಸರಹಳ್ಳಿಯಲ್ಲಿ ವಾಸವಿದ್ದರು. ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
‘ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ಶ್ರೀನಿವಾಸ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ್ದ ವೈದ್ಯರು, ಅವರು ಮಾರ್ಗಮಧ್ಯೆಯೇ ತೀರಿಕೊಂಡಿದ್ದಾಗಿ ಹೇಳಿದರು’ ಎಂದು ಸಹೋದ್ಯೋಗಿಗಳು ತಿಳಿಸಿದರು.
ಅಂತ್ಯಕ್ರಿಯೆ ಸ್ವಗ್ರಾಮ ಹನುಮಣ್ಣನ ಪಾಳ್ಯದಲ್ಲಿ ಭಾನುವಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.