ADVERTISEMENT

ಜೋರು ಮಳೆ: ಸಿಡಿಲಿನ ಅಬ್ಬರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 19:42 IST
Last Updated 9 ಅಕ್ಟೋಬರ್ 2020, 19:42 IST

ಬೆಂಗಳೂರು: ನಗರದ ಕೆಲ ಪ್ರದೇಶಗಳಲ್ಲಿ ಗುಡುಗು–ಸಿಡಿಲು ಸಹಿತವಾಗಿ ಶುಕ್ರವಾರ ಮಧ್ಯಾಹ್ನ ಜೋರು ಮಳೆ ಸುರಿಯಿತು.

ನಗರದ ಬಹುತೇಕ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಸುರಿಯಲಾರಂಭಿಸಿತು. ಕೆಲವೆಡೆ ಜೋರು ಮಳೆ ಇದ್ದರೆ, ಇನ್ನು ಹಲವೆಡೆ ಜಿಟಿ ಜಿಟಿ ಮಳೆ ಇತ್ತು.

ಬಾಣಸವಾಡಿ, ನಾಗಾವರ, ಹೆಣ್ಣೂರು, ಮಲ್ಲೇಶ್ವರ, ಆರ್‌.ಟಿ.ನಗರ, ಹೆಬ್ಬಾಳ, ಸಂಜಯನಗರ, ಪೀಣ್ಯ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಿತ್ತು. ರಾಜಾಜಿನಗರ, ಬಸವೇಶ್ವರ ನಗರ, ವಿಜಯನಗರ ಹಾಗೂ ಸುತ್ತಮುತ್ತ ಕಡಿಮೆ ಪ್ರಮಾಣದಲ್ಲಿ ಮಳೆಯಾಯಿತು.

ADVERTISEMENT

’ನಗರದ ಪೂರ್ವ, ದಕ್ಷಿಣ ಭಾಗದಲ್ಲಿ ಮಾತ್ರ ಮಧ್ಯಾಹ್ನ ಜೋರು ಮಳೆಯಾಗಿದೆ. ಗಾಳಿಯೂ ವೇಗವಾಗಿ ಬೀಸಿದೆ. ಮರದ ಕೊಂಬೆಗಳು ಬಿದ್ದಿರುವ ಹಾಗೂ ರಸ್ತೆಯಲ್ಲಿ ನೀರು ನಿಂತ ಬಗ್ಗೆ ದೂರುಗಳು ಬಂದಿದ್ದವು’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.