ಬೆಂಗಳೂರು: ಕಾವೇರಿ ಭವನಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ತಕ್ಷಣವೇ ಚಾಲಕ ಬಸ್ ಅನ್ನು ಬಲಕ್ಕೆ ಚಲಾಯಿಸುವ ಮೂಲಕ ಪ್ರಾಣ ಹಾನಿ ತಪ್ಪಿಸಿದ್ದಾರೆ.
ಪ್ಯಾಲೆಸ್ ಗುಟ್ಟಹಳ್ಳಿಯ ಅರಮನೆ ಮೈದಾನದ ಮುಂಭಾಗ ಗೇಟ್ ನಂಬರ್ 7ರ ಬಳಿ ಬಸ್ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯ ಮರದ ಕೊಂಬೆ ಬಸ್ ಮೇಲೆ ಬಿದ್ದಿದೆ. ಕೊಂಬೆ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ನಾಗರಾಜು, ರಸ್ತೆಯ ಬಲಕ್ಕೆ ಬಸ್ ತಿರುಗಿಸಿದ್ದಾರೆ. ಹೀಗಾಗಿ ಕೊಂಬೆ ಬಸ್ನ ಕನ್ನಡಿ ಮೇಲೆ ಬಿದ್ದಿದೆ.
‘ಒಂದು ವೇಳೆ ಮರದ ಕೊಂಬೆ ಬಸ್ ಮೇಲೆ ಬಿದ್ದಿದ್ದರೆ, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಬಸ್ನಲ್ಲಿ 67 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ’ ಎಂದು ಚಾಲಕ ನಾಗರಾಜ್ ತಿಳಿಸಿದರು.
ಈ ಘಟನೆಯಿಂದ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.