ADVERTISEMENT

ಗುಡಿಸಲು ನಾಶ: ಪುನರ್‌ವಸತಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 3:04 IST
Last Updated 5 ಡಿಸೆಂಬರ್ 2020, 3:04 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕಾಚರಕನಹಳ್ಳಿಯಲ್ಲಿ ಗುಡಿಸಲು ಕಳೆದುಕೊಂಡ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ಈ ಘಟನೆಯಲ್ಲಿ ಸುಮಾರು 170 ಕುಟುಂಬಗಳು ಮನೆ ಕಳೆದುಕೊಂಡಿವೆ. ಈ ಘಟನೆ ಬಗ್ಗೆ ಸರ್ಕಾರದ ಆಡಳಿತ ಯಂತ್ರಕ್ಕೆ ಸಂಪೂರ್ಣ ಮಾಹಿತಿ ಇತ್ತು. ಈ ಜನರ ಮೂಲಭೂತ ಹಕ್ಕು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿತು.

ADVERTISEMENT

‘ಪರಿಹಾರ ಪ್ರಕ್ರಿಯೆಯನ್ನು ಮೂರು ವಾರಗಳಲ್ಲಿ ಪೂರ್ಣಗೊಳಿಸಬೇಕು. ಗುಡಿಸಲು ನಾಶ ಮಾಡಿದ ಸ್ಥಳದಲ್ಲೇ ಪುನರ್ವಸತಿ ಕಲ್ಪಿಸಬೇಕು’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.