ADVERTISEMENT

ಅಕ್ರಮ ನಿವಾಸಿಗಳಿದ್ದರೆ ಕ್ರಮ ಕೈಗೊಳ್ಳಿ: ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 17:33 IST
Last Updated 3 ಆಗಸ್ಟ್ 2020, 17:33 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು:ಸ್ವಾಧೀನಾನುಭವ ದೃಢೀಕರಣ ಪತ್ರ ಇಲ್ಲದೇ ಕಟ್ಟಡದಲ್ಲಿ ನೆಲೆಸಿದ್ದರೆಜೆ.ಪಿ.ನಗರ 4ನೇ ಹಂತದ ಡಾಲರ್ಸ್‌ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಂಜೂರಾದ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗಿದೆ.ಎರಡು ಮಹಡಿಗಳಲ್ಲಿಅಕ್ರಮವಾಗಿ ನೆಲೆಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮುಂದೆ ಎದುರುದಾರ ಪರ ವಕೀಲರು, ‘ಸಂಘದ ಪದಾಧಿಕಾರಿಗಳೂ ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದ ವಾಸವಿದ್ದಾರೆ’ ಎಂದು ತಿಳಿಸಿದರು. ‘ಯಾರೇ ಅಕ್ರಮವಾಗಿ ನೆಲೆಸಿದ್ದರೂ ಕ್ರಮ ಕೈಗೊಳ್ಳಿ’ ಎಂದು ಪೀಠವು ಪಾಲಿಕೆಗೆ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.