ಬೆಂಗಳೂರು:ಸ್ವಾಧೀನಾನುಭವ ದೃಢೀಕರಣ ಪತ್ರ ಇಲ್ಲದೇ ಕಟ್ಟಡದಲ್ಲಿ ನೆಲೆಸಿದ್ದರೆಜೆ.ಪಿ.ನಗರ 4ನೇ ಹಂತದ ಡಾಲರ್ಸ್ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಂಜೂರಾದ ನಕ್ಷೆ ಉಲ್ಲಂಘಿಸಿ ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಾಗಿದೆ.ಎರಡು ಮಹಡಿಗಳಲ್ಲಿಅಕ್ರಮವಾಗಿ ನೆಲೆಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮುಂದೆ ಎದುರುದಾರ ಪರ ವಕೀಲರು, ‘ಸಂಘದ ಪದಾಧಿಕಾರಿಗಳೂ ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದ ವಾಸವಿದ್ದಾರೆ’ ಎಂದು ತಿಳಿಸಿದರು. ‘ಯಾರೇ ಅಕ್ರಮವಾಗಿ ನೆಲೆಸಿದ್ದರೂ ಕ್ರಮ ಕೈಗೊಳ್ಳಿ’ ಎಂದು ಪೀಠವು ಪಾಲಿಕೆಗೆ ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.