ADVERTISEMENT

ಅನಧಿಕೃತ ಜಾಹೀರಾತು: ಮಾಹಿತಿ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 5:56 IST
Last Updated 27 ಫೆಬ್ರುವರಿ 2020, 5:56 IST
   

ಬೆಂಗಳೂರು: ‘ಅನಧಿಕೃತ ಜಾಹಿರಾತು ಅಳವಡಿಕೆಗೆ ಸಂಬಂಧಿಸಿದಂತೆ ಈವರೆಗೆ ಬಂದಿರುವ ದೂರು ಮತ್ತು ದಾಖಲಿಸಿಕೊಂಡಿರುವ ಎಫ್‌ಐಆರ್‌ಗಳ ಬಗ್ಗೆ ಮಾಹಿತಿ ಒದಗಿಸಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಅಕ್ರಮ ಜಾಹಿರಾತುಗಳನ್ನು ತೆರವುಗೊಳಿಸುವಂತೆ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಷ್ಟು ಎಫ್‌ಐಆರ್‌ ದಾಖಲಿಸಲಾಗಿದೆ. ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಎಷ್ಟು ದೂರುಗಳು ಬಂದಿವೆ. ಅವುಗಳ ಸಂಬಂಧ ಈವರೆಗೆ ಯಾವ ಕ್ರಮ ಜರುಗಿಸಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್‌ 31ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.