ADVERTISEMENT

ನಟ ಉಪೇಂದ್ರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ FIRಗೆ ಹೈಕೋರ್ಟ್ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 7:32 IST
Last Updated 17 ಆಗಸ್ಟ್ 2023, 7:32 IST
ಉಪೇಂದ್ರ, ಹೈಕೋರ್ಟ್
ಉಪೇಂದ್ರ, ಹೈಕೋರ್ಟ್    

ಬೆಂಗಳೂರು: ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.

ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ - 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್‌ಐಆರ್‌ ದಾಖಲಾಗಿತ್ತು.

ADVERTISEMENT

ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆ ಯತ್ನವವೂ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.