ADVERTISEMENT

ವೃಷಭಾವತಿ ತಿರುವು ಯೋಜನೆ ಕಾಮಗಾರಿಗೆ ತಡೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 21:00 IST
Last Updated 24 ನವೆಂಬರ್ 2020, 21:00 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ವೃಷಭಾವತಿ ನದಿ ತಿರುವು ಯೋಜನೆಯ ಎಲ್ಲಾ ಕಾಮಗಾರಿಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಎನ್ವಿರಾನ್‌ಮೆಂಟ್ ಟ್ರಸ್ಟ್‌ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ,ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯ(ನೀರಿ) ತಜ್ಞರ ಅಭಿಪ್ರಾಯ ಪಡೆಯಲು ಕಾವೇರಿ ನೀರಾವರಿ ನಿಗಮ ಮತ್ತು ರಾಜ್ಯ ಸರ್ಕಾರ ಸಿದ್ಧವಿದೆಯೇ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚಿಸಿದೆ.

‘ಯಾವುದೇ ವೈಜ್ಞಾನಿಕ ಅಧ್ಯಯನ ಇಲ್ಲದೆ ಈ ಯೋಜನೆಗೆ 2018ರ ನವೆಂಬರ್‌ 23ರಲ್ಲಿ ಸರ್ಕಾರ ₹110 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಯೋಜನೆಯಿಂದ ಕೆರೆಯ ವ್ಯಾಪ್ತಿ ಕುಗ್ಗಲಿದೆ. ಅಲ್ಲದೇ ವೃಷಭಾವತಿ ನದಿಯನ್ನು ಇನ್ನಷ್ಟು ಕಲುಷಿತಗೊಳಿಸಲಿದೆ. ಕೆರೆ ನಂಬಿಕೊಂಡಿರುವ ನೀರಾವರಿ ಪ್ರದೇಶದ ರೈತರು ತೊಂದರೆಗೆ ಸಿಲುಕಲಿದ್ದಾರೆ’ ಎಂದು ಅರ್ಜಿದಾರರು ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.