ADVERTISEMENT

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಗೆ ನ್ಯಾಯಮೂರ್ತಿ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 19:19 IST
Last Updated 19 ಮಾರ್ಚ್ 2022, 19:19 IST
ಆಸ್ಪತ್ರೆಯಲ್ಲಿ ಮಗುವಿನ ಆರೋಗ್ಯ ವಿಚಾರಿಸಿದ ನ್ಯಾಯಮೂರ್ತಿ ಬಿ. ವೀರಪ್ಪ
ಆಸ್ಪತ್ರೆಯಲ್ಲಿ ಮಗುವಿನ ಆರೋಗ್ಯ ವಿಚಾರಿಸಿದ ನ್ಯಾಯಮೂರ್ತಿ ಬಿ. ವೀರಪ್ಪ   

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಗೆಶನಿವಾರ ಅನಿರೀಕ್ಷಿತ ಭೇಟಿ ನೀಡಿ ಕುಂದು–ಕೊರತೆ ಪರಿಶೀಲಿಸಿದರು.

ಆಸ್ಪತ್ರೆಯಲ್ಲಿನ ಚಿಕಿತ್ಸೆಯ ಅವ್ಯವಸ್ಥೆ, ರೋಗಿಗಳಿಗೆ ನೀಡಲಾಗುವ ಸೌಲಭ್ಯಗಳು, ವಿಶೇಷವಾಗಿ ಆ್ಯಸಿಡ್ ದಾಳಿಗೊಳಗಾದವರ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪ್ರಾಧಿಕಾರಕ್ಕೆ ಬಂದಿದ್ದ ದೂರುಗಳನ್ನು ಆಧರಿಸಿ ದಿಢೀರ್ ಭೇಟಿ ನೀಡಿದ್ದರು.

ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿದ ಅವರು, ರೋಗಿಗಳ ಯೋಗಕ್ಷೇಮ, ಅವರಿಗೆ ಸಿಗುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಧೈರ್ಯ ತುಂಬಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.