ADVERTISEMENT

‘ಚಿಕಿತ್ಸೆ ನಿರಕಾರಣೆ: ದೂರು ದಾಖಲಿಸುವ ಕಾರ್ಯ ವಿಧಾನ ವಿವರಿಸಿ‘

ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 22:12 IST
Last Updated 5 ಆಗಸ್ಟ್ 2020, 22:12 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೊರೊನಾ ಸೋಂಕಿತರಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಂತ್ರಸ್ತರು ದೂರು ದಾಖಲಿಸುವ ಕಾರ್ಯ ವಿಧಾನಗಳ ಬಗ್ಗೆ ವಿವರ ಸಲ್ಲಿಸುವಂತೆ ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.

‘ಈ ಸಂಬಂಧನಾಗರಿಕರಿಗೆ ಯಾವುದೇ ಸಹಾಯವಾಣಿ ಸಂಖ್ಯೆ ಲಭ್ಯವಿದೆಯೇ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಕೇಳಿತು.

‘ಸೋಂಕಿತರಲ್ಲದ ರೋಗಿಗಳು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರುತಕ್ಷಣದ ವೈದ್ಯಕೀಯ ನೆರವು ಪಡೆಯಲು ಆಗುತ್ತಿಲ್ಲ’ ಎಂದು ವಕೀಲ ಎಲ್. ರಮೇಶ್‌ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪೀಠ ವಿಚಾರಣೆ ನಡೆಸಿತು.

ADVERTISEMENT

‘ಚಿಕಿತ್ಸೆ ನಿರಾಕರಿಸುವಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ವೈದ್ಯಕೀಯ ಪರಿಷತ್ತಿನ ಪರ ವಕೀಲರು ತಿಳಿಸಿದರು. ‘ದೂರು ನೀಡಲು ಇರುವ ಕಾರ್ಯ ವಿಧಾನಗಳ ಬಗ್ಗೆ ವರದಿ ಸಲ್ಲಿಸಿ’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.