ಬೆಂಗಳೂರು: ಕೋರಮಂಗಲ 4ನೇ ಹಂತದಲ್ಲಿರುವ ಮನೆಯೊಂದರಲ್ಲಿ ಉದ್ಯಮಿಯೊಬ್ಬರ ಮಗಳನ್ನು ಬೆದರಿಸಿ ಕಳ್ಳತನ ಮಾಡಲಾಗಿದ್ದು, ಮನೆ ಕೆಲಸದವರ ವಿರುದ್ಧ ಪ್ರಕರಣ ದಾಖಲಾಗಿದೆ.
‘ಉದ್ಯಮಿ ಮದನ್ ರೆಡ್ಡಿ ಎಂಬುವರ ಮನೆಯಲ್ಲಿದ್ದ ₹ 6 ಲಕ್ಷ ನಗದು ಹಾಗೂ ಚಿನ್ನಾಭರಣ ಕಳವು ಮಾಡಲಾಗಿದೆ. ಮನೆ ಕೆಲಸದವರೇ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಹೊಸೂರಿನಲ್ಲಿ ಫಾರ್ಮ್ಹೌಸ್ ಹೊಂದಿರುವ ಮದನ್ ರೆಡ್ಡಿ, ಕುಟುಂಬ ಸಮೇತರಾಗಿ ಅಲ್ಲಿಗೆ ಹೋಗಿದ್ದರು. ಮಗಳು ಮಾತ್ರ ಮನೆಯಲ್ಲಿದ್ದಳು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳದ ವ್ಯಕ್ತಿಗಳೇ, ಮಗಳನ್ನು ಬೆದರಿಸಿ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ನಂತರ, ಮಗಳೇ ಪಕ್ಕದ ಮನೆಯವರ ಸಹಾಯದಿಂದ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಚಿನ್ನಾಭರಣದ ಮೌಲ್ಯವೆಷ್ಟು ಎಂಬುದು ಗೊತ್ತಾಗಿಲ್ಲ’ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.