ಬೆಂಗಳೂರು: ನಗರದ 15 ಮನೆಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
‘ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಇತ್ತೀಚೆಗೆ ಆತನ ವಿಳಾಸ ಪತ್ತೆ ಮಾಡಿ ಬಂಧಿಸಲಾಗಿದೆ. ₹ 65 ಲಕ್ಷ ಮೌಲ್ಯದ 1 ಕೆ.ಜಿ 300 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಹಲಸೂರು ಗೇಟ್, ಸಿಟಿ ಮಾರ್ಕೆಟ್, ಕಮರ್ಷಿಯಲ್ ಸ್ಟ್ರೀಟ್, ಚಾಮರಾಜಪೇಟೆ, ಕಾಟನ್ಪೇಟೆ, ಸಿದ್ದಾಪುರ, ಅನ್ನಪೂರ್ಣೇಶ್ವರಿನಗರ, ಹನುಮಂತನಗರ ಠಾಣೆ ವ್ಯಾಪ್ತಿಯ ಮನೆಗಳಲ್ಲಿ ಆರೋಪಿ ಕಳ್ಳತನ ಮಾಡಿದ್ದ. ಹೋಟೆಲ್ನಲ್ಲಿ ವಾಸವಿರುತ್ತಿದ್ದ ಆರೋಪಿ, ಪೊಲೀಸರಿಗೆ ಸುಳಿವು ಸಿಗಬಾರದೆಂದು ಆಗಾಗ ಹೋಟೆಲ್ ಬದಲಾಯಿಸುತ್ತಿದ್ದ. ತಮಿಳುನಾಡು, ಗೋವಾ, ಆಂಧ್ರಪ್ರದೇಶದಲ್ಲೂ ಕೆಲದಿನ ಸುತ್ತಾಡಿದ್ದ. ಇತ್ತೀಚೆಗಷ್ಟೆ ಮೈಸೂರಿಗೆ ಬಂದಿದ್ದ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.