ಬೆಂಗಳೂರು: ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಲಗ್ಗೆರೆಯಲ್ಲಿ ಗೃಹಿಣಿ ಸಾವಿತ್ರಿ (26) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಪತಿ ಪ್ರದೀಪ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಪತಿಗೆ ಬೇರೊಬ್ಬ ಮಹಿಳೆ ಜೊತೆ ಸಲುಗೆ ಇರುವುದಾಗಿ ಸಾವಿತ್ರಿ ಅನುಮಾನಗೊಂಡಿದ್ದರು. ಅದೇ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳ ಆಗುತ್ತಿತ್ತು. ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಇದೆ’ ಎಂದು ಪೊಲೀಸರು ಹೇಳಿದರು.
‘ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಪ್ರದೀಪ್ ಹಾಗೂ ಸಾವಿತ್ರಿ ಮೂರೂವರೆ ವರ್ಷದ ಹಿಂದೆ ಮದುವೆ ಆಗಿದ್ದರು. ದಂಪತಿಗೆ ಗಂಡು ಮಗು ಇದೆ.’
‘ಗಾರ್ಮೆಂಟ್ಸ್ ಉದ್ಯೋಗಿ ಆಗಿರುವ ಪ್ರದೀಪ್ ಬೇರೊಬ್ಬರ ಜೊತೆ ಸಲುಗೆಯಿಂದ ಇದ್ದರು ಎನ್ನಲಾಗಿದೆ. ಅದೇ ವಿಚಾರಕ್ಕೆ ದಂಪತಿ
ನಡುವೆ ಜಗಳ ಶುರುವಾಗಿತ್ತು. ಶನಿವಾರವೂ ದಂಪತಿ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಪ್ರದೀಪ್
ಬೇಸರ ಮಾಡಿಕೊಂಡು ಮನೆಯಿಂದ ಹೊರ ಹೋಗಿದ್ದರು. ಅದೇ ಸಂದರ್ಭದಲ್ಲಿ ಸಾವಿತ್ರಿ ಮಲಗುವ ಕೋಣೆಯಲ್ಲಿರುವ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.