ADVERTISEMENT

ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರ ಮೂಲಕ ಗೌರವಾರ್ಪಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 6:40 IST
Last Updated 11 ಜೂನ್ 2020, 6:40 IST
ಕೊರೊನಾ ಯೋಧರನ್ನು ಬೆಂಗಳೂರು ವಿಧಾನಸೌಧದ ಎದುರು ಹೂವಿನ ಅಲಂಕಾರದೊಂದಿಗೆ ಗೌರವಿಸಲಾಯಿತು.
ಕೊರೊನಾ ಯೋಧರನ್ನು ಬೆಂಗಳೂರು ವಿಧಾನಸೌಧದ ಎದುರು ಹೂವಿನ ಅಲಂಕಾರದೊಂದಿಗೆ ಗೌರವಿಸಲಾಯಿತು.   

ಬೆಂಗಳೂರು:ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರದ ಮೂಲಕ ವಿಶಿಷ್ಟವಾಗಿ ಗೌರವ ಸಮರ್ಪಣೆ ಕಾರ್ಯಕ್ರಮ ಗುರುವಾರ ವಿಧಾಸಸೌಧದ ಮುಂಭಾಗ ನಡೆಯಿತು.

ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮವನ್ನು ತೋಟಗಾರಿಕಾ ಸಚಿವ ನಾರಾಯಣ ಗೌಡ ಉದ್ಘಾಟಿಸಿದರು.

1 ಲಕ್ಷದ 72 ಸಾವಿರ ಹೂಗಳನ್ನು ಬಳಸಿ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು.

ADVERTISEMENT

ಕಾರ್ಯಕ್ರಮದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.