ಬೆಂಗಳೂರು: ಶಾಂತಿನಗರದ ಡಬಲ್ ರಸ್ತೆ ಯಲ್ಲಿರುವ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ನವೀನ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ತುಮಕೂರು ಜಿಲ್ಲೆಯವರು ಎನ್ನಲಾದ ನವೀನ್, 15 ವರ್ಷಗಳಿಂದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ’ ಎಂದು ಅಶೋಕನಗರ ಪೊಲೀಸರು ಹೇಳಿದರು.
‘ಕೆಲಸಗಾರರು ಉಳಿದುಕೊಳ್ಳಲು ಹೋಟೆಲ್ನವರೇ ಕೊಠಡಿ ನೀಡಿದ್ದಾರೆ. ಅದೇ ಕೊಠಡಿಯಲ್ಲಿ ಶುಕ್ರವಾರ ರಾತ್ರಿ ಫ್ಯಾನ್ಗೆ ನೇಣು ಹಾಕಿಕೊಂಡು ನವೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.