ಬೆಂಗಳೂರು: ಮನೆ ಬಾಡಿಗೆ ವಿವಾದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸದಾಶಿವನಗರ ಪೊಲೀಸರು ನೋಟಿಸ್ ನೀಡಿದ್ದಾರೆ.
ನೋಟಿಸ್ಗೆ ಪ್ರತಿಕ್ರಿಯಿಸಿರುವ ಬಾಬು ಅವರು, ‘ಕೆಲಸದ ನಿಮಿತ್ತ ನಗರದಿಂದ ಹೊರಗೆ ಬಂದಿದ್ದೇನೆ. ಹೀಗಾಗಿ, ಸ್ವಲ್ಪ ಕಾಲಾವಕಾಶ ನೀಡಬೇಕು’ ಎಂದು ಕೋರಿದ್ದಾರೆ. ಈ ಮನವಿ ಮಾನ್ಯ ಮಾಡಿರುವ ಪೊಲೀಸರು, ‘ನಗರಕ್ಕೆ ಮರಳಿದ ಕೂಡಲೇ ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಿದ್ದಾರೆ.
ಆರ್ಎಂವಿ ಬಡಾವಣೆಯಲ್ಲಿ ಪ್ರಸನ್ನ ಎಂಬುವರ ಮನೆಯಲ್ಲಿ ನೆಲೆಸಿರುವ ಅವರು, ಇತ್ತೀಚೆಗೆ ಬಾಡಿಗೆ ವಿಚಾರದಲ್ಲಿ ವಿವಾದ ಸೃಷ್ಟಿಸಿಕೊಂಡಿದ್ದರು.
‘ಮನೆ ಬಾಡಿಗೆ ಕೇಳಿದ್ದಕ್ಕೆ ರಾಜೇಂದ್ರ ಸಿಂಗ್ ಬಾಬು ಹಾಗೂ ಅವರ ಮಗ ಆದಿತ್ಯ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿ ಮೇ 5ರಂದು ಸದಾಶಿವನಗರ ಠಾಣೆಗೆ ಪ್ರಸನ್ನ ದೂರು ಕೊಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.