ADVERTISEMENT

ಭಾರಿ ಮಳೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2019, 18:32 IST
Last Updated 17 ಜುಲೈ 2019, 18:32 IST
   

ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಸಾರ್ವಜನಿಕರು, ಪ್ರವಾಸಿಗರು ಕಡಲತೀರಗಳಿಗೆ ಭೇಟಿ ನೀಡುವ ವೇಳೆಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆಅದು ಹೇಳಿಕೆಯಲ್ಲಿ ತಿಳಿಸಿದೆ.

ಹುಬ್ಬಳ್ಳಿ, ಧಾರವಾಡ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬುಧವಾರ ಸಂಜೆ ಮಳೆ ಸುರಿಯಿತು.

ADVERTISEMENT

ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಂಜೆಯಿಂದ ಸಾಧಾರಣ ಮಳೆಯಾಗುತ್ತಿದೆ. ಮಡಿಕೇರಿ, ತಲಕಾವೇರಿ, ನಾಪೋಕ್ಲು ಹಾಗೂ ಭಾಗಮಂಡಲ ಭಾಗದಲ್ಲೂ ಸಾಧಾರಣ ಮಳೆ ಸುರಿದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಹಾಗೂ ಸುತ್ತಮುತ್ತಲಿನಲ್ಲಿ ಬುಧವಾರ ಮಧ್ಯಾಹ್ನ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.