ADVERTISEMENT

ತವರಿನಿಂದ ಬಂದ ಪತ್ನಿಗೆ ಮನೆ ಬಾಗಿಲು ತೆಗೆಯದೆ ಪತಿ ಪರಾರಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 2:43 IST
Last Updated 8 ಜುಲೈ 2020, 2:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೂರು ತಿಂಗಳ ಬಳಿಕ ತವರಿನಿಂದ ಬಂದ ಪತ್ನಿಗೆ ಬಾಗಿಲು ತೆಗೆಯಲು ಪತಿ ಹಿಂದೇಟು ಹಾಕಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾರ್ಚ್‌ನಲ್ಲಿ ಪತ್ನಿ ಚಂಡೀಗಡದಲ್ಲಿರುವ ತವರಿಗೆ ಹೋಗಿದ್ದರು. ದಿಢೀರ್ ಲಾಕ್‍ಡೌನ್ ಆಗಿದ್ದರಿಂದ ಅಲ್ಲಿಯೇ ಉಳಿದಿದ್ದರು. ಪತಿ ಮತ್ತು 10 ವರ್ಷದ ಮಗ ಮಾತ್ರ ಬೆಂಗಳೂರಿನಲ್ಲಿದ್ದರು. ಸದ್ಯ ಮಹಿಳೆ ಬೆಂಗಳೂರಿಗೆ ಬಂದಿದ್ದಾರೆ. ಆದರೆ, ಮಹಿಳೆಗೆ ಗಂಡ ಬಾಗಿಲು ತೆರೆಯದೇ ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ಮೂರು ತಿಂಗಳ ಬಳಿಕ ಬಂದ ಪತ್ನಿಯನ್ನು ಪತಿ ಮನೆ ಹೊರಗೆ ನಿಲ್ಲಿಸಿದ್ದಾರೆ. 14 ದಿನ ಮನೆಯಲ್ಲಿ ಕ್ವಾರಂಟೈನ್‌ನಲ್ಲಿದ್ದು, ಕೋವಿಡ್ ಪರೀಕ್ಷೆ ವರದಿ ಬಂದ ಬಳಿಕ ಹೊರ ಬರುವುದಾಗಿ ಪತ್ನಿ ಹೇಳಿದರೂ ಬಾಗಿಲು ತೆಗೆದಿಲ್ಲ. ಮಹಿಳೆ ವರ್ತೂರು ಠಾಣೆಯ ಪೊಲೀಸರನ್ನು ಸಂಪರ್ಕಿಸಿ ಸಹಾಯ ಮಾಡುವಂತೆ ಕೇಳಿದ್ದಾರೆ.

ADVERTISEMENT

ಪೊಲೀಸರು ಫೋನ್ ಮಾಡಿದರೆ ಪತಿ ರಿಸೀವ್ ಮಾಡಿಲ್ಲ. ಪೊಲೀಸರು ಮನೆಗೆ ಬರಬಹುದೆಂದು ತಿಳಿದು ಬೀಗ ಹಾಕಿಕೊಂಡು ಪರಾರಿ ಆಗಿದ್ದಾರೆ. ಮಹಿಳೆಗೆ ಆಕೆಯ ಸಂಬಂಧಿಕರ ಮನೆಯಲ್ಲಿ ಇರಿಸುವ ವ್ಯವಸ್ಥೆಯನ್ನು ಪೊಲೀಸರು ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.