ಬೆಂಗಳೂರು: ನಟ ಅಲ್ಲು ಅರ್ಜುನ್ ಅವರು ನಾಗಾರ್ಜುನ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು.
‘ಬೆಂಗಳೂರಿನ ವಾತಾವರಣ ನನಗೆ ಇಷ್ಟ. ಇಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡುತ್ತೇನೆ’ ಎಂದರು.
‘ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಬೇಕು. ಇದರಿಂದ ಪಠ್ಯದಾಚೆಗಿನ ಜಗತ್ತಿನ ಅರಿವು ಆಗಲಿದೆ’ ಎಂದರು.
ನಗರದ 50ಕ್ಕೂ ಹೆಚ್ಚಿನ ಎಂಜಿನಿಯರಿಂಗ್ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.