ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳು ನಿವೃತ್ತರಾದ ಹಿನ್ನೆಲೆಯಲ್ಲಿ ಅವರ ಬಳಿ ಇದ್ದ ಹುದ್ದೆಗಳನ್ನು ಇತರರಿಗೆ ಹೆಚ್ಚುವರಿಯಾಗಿ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಆರ್.ಆರ್. ಜನ್ನು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಮತ್ತು ಸರ್ವೆ, ಸೆಂಟ್ಲಮೆಂಟ್ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಎಂ.ಕೆ. ಶ್ರೀರಂಗಯ್ಯ, ಕಾರ್ಮಿಕ ಇಲಾಖೆ ಆಯುಕ್ತ ಕೆ.ಜಿ. ಶಾಂತಾರಾಮ್ ನಿವೃತ್ತಿಯಾಗಿದ್ದಾರೆ.
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎನ್. ಮಂಜುಳಾ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹೊಣೆ ಹೆಚ್ಚುವರಿಯಾಗಿ ನೀಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಆರ್. ರಾಮಚಂದ್ರನ್ ಅವರಿಗೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಹೊಣೆ ನೀಡಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತ ಕೆ.ಪಿ. ಮೋಹನ್ರಾಜ್ ಅವರಿಗೆ ಸರ್ವೆ, ಸೆಂಟ್ಲಮೆಂಟ್ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಹುದ್ದೆ ವಹಿಸಲಾಗಿದೆ. ಕಬ್ಬು ಅಭಿವೃದ್ಧಿ ಆಯುಕ್ತ ಮತ್ತು ಸಕ್ಕರೆ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಕಾರ್ಮಿಕ ಇಲಾಖೆ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.