ADVERTISEMENT

ಐಐಎಂಬಿಗೆ ದೇವಿಶೆಟ್ಟಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 19:41 IST
Last Updated 22 ಅಕ್ಟೋಬರ್ 2018, 19:41 IST
ದೇವಿ ಪ್ರಸಾದ್ ಶೆಟ್ಟಿ
ದೇವಿ ಪ್ರಸಾದ್ ಶೆಟ್ಟಿ   

ಬೆಂಗಳೂರು: ನಾರಾಯಣ ಆಸ್ಪತ್ರೆ ಸಮೂಹದ ಅಧ್ಯಕ್ಷ ಹಾಗೂ ಹೃದ್ರೋಗ ತಜ್ಞರಾಗಿರುವ ಡಾ.ದೇವಿ ಪ್ರಸಾದ್ ಶೆಟ್ಟಿ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್‌ ಮ್ಯಾನೇಜ್‌ ಮೆಂಟ್‌ (ಐಐಎಂ) ಬೆಂಗಳೂರು ಸಂಸ್ಥೆಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್‌ ಮೊದಲ ವಾರದಲ್ಲಿ ನೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ಬಳಿಕ ದೇವಿಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ನಾಲ್ಕು ವರ್ಷಗಳವರೆಗೆ ಅವರು ಅಧಿಕಾರದಲ್ಲಿ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ಭಾರತದ ಅತಿದೊಡ್ಡ ಸಂಸ್ಥೆಯಾಗಿ ಐಐಎಂಬಿ ಬೆಳೆ ಯುತ್ತಿದೆ. ಆ ಸಂಸ್ಥೆಯ ಬೆಳವಣಿಗೆಗೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ’ ಎಂದು ಶೆಟ್ಟಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.