ADVERTISEMENT

ಐಐಎಂಬಿ ಸುವರ್ಣ ಮಹೋತ್ಸವ: 26ಕ್ಕೆ ರಾಷ್ಟ್ರಪತಿ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 15:59 IST
Last Updated 21 ಅಕ್ಟೋಬರ್ 2023, 15:59 IST
   

ಬೆಂಗಳೂರು: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂಬಿ) ಸುವರ್ಣ ಮಹೋತ್ಸವ ಸಪ್ತಾಹವು ಅ.26ರಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. 

ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮ ಆಯೋಜಿಸುತ್ತಿದೆ. ಉದ್ಘಾಟನೆಯ ನಂತರ ‘ಮೇಕಿಂಗ್ ಆಫ್ ಐಐಎಂಬಿ’ ಪುಸ್ತಕ ಬಿಡುಗಡೆ ಹಾಗೂ ಸಂಸ್ಥೆಯ 50 ವರ್ಷಗಳ ಪಯಣದ ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಲಿದೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್‌, ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷ ಡಾ.ದೇವಿ ಪ್ರಸಾದ್‌ ಶೆಟ್ಟಿ, ನಿರ್ದೇಶಕ ರಿಷಿಕೇಶ ಟಿ. ಕೃಷ್ಣನ್‌ ಭಾಗವಹಿಸುವರು ಎಂದು ಐಐಎಂಬಿ ಹೇಳಿಕೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.