ADVERTISEMENT

‘ಕೋಟಿ ಕೊಟ್ಟ ಕುಲಪತಿಗಳು ಅಕ್ರಮ ನಡೆಸದಿರಲು ಸಾಧ್ಯವೇ?’

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 20:25 IST
Last Updated 10 ಡಿಸೆಂಬರ್ 2020, 20:25 IST
ಪ್ರಾತಿನಿಧಿಕ ತಿಕ್ರ
ಪ್ರಾತಿನಿಧಿಕ ತಿಕ್ರ   

ಬೆಂಗಳೂರು: 'ಕುಲಪತಿಗಳ ನೇಮಕದಲ್ಲಿ ಹಿಂದೆ ಅಕ್ರಮ ನಡೆಯುತ್ತಿತ್ತು. ಐದಾರು ಕೋಟಿ ಲಂಚ ಕೊಟ್ಟು ಹುದ್ದೆ ಪಡೆಯುತ್ತಿದ್ದವರು ಅಕ್ರಮ ನಡೆಸದೇ ಇರಲು ಸಾಧ್ಯವೇ' ಎಂದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನಿಸಿದರು.

ವಿಧಾನ ಪರಿಷತ್‌ನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.‌ಸಿ.ಎನ್.‌ ಅಶ್ವತ್ಥನಾರಾಯಣ ಮಂಡಿಸಿದ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಇತರೆ ಕೆಲವು ಕಾನೂನು ತಿದ್ದುಪಡಿ ಮಸೂದೆ ಮೇಲೆ‌ ನಡೆದ ಚರ್ಚೆ ವೇಳೆ‌ ಮಾತನಾಡಿದ ಅವರು, 'ಈ ವ್ಯವಸ್ಥೆಗೆ ಸುಧಾರಣೆ ತರಲು ಈಗಾಗಲೇ ಹಲವು ಕ್ರಮಗಳನ್ನು ಸಚಿವರು ಕೈಗೊಂಡಿದ್ದಾರೆ. ಕಾಯ್ದೆ ತಿದ್ದುಪಡಿ ಈ ಯತ್ನಗಳಿಗೆ ಪೂರಕವಾಗಲಿದೆ. ವಿಶ್ವವಿದ್ಯಾಲಯಗಳ ಪ್ರಗತಿ
ಯಲ್ಲಿ ಶಾಸಕರು ಪಾಲ್ಗೊಳ್ಳುವ ಕಾರ್ಯ ಆಗಬೇಕು. ಯಾವ ರೀತಿ ಬಳಸಿಕೊಳ್ಳಬಹುದು ಎನ್ನುವುದನ್ನು ಸಚಿವರು ನಿರ್ಧರಿಸಬೇಕು’ ಎಂದು ತಿಳಿಸಿದರು.

ಕಾಯ್ದೆ ತಿದ್ದುಪಡಿ ಅಗತ್ಯದ ಬಗ್ಗೆ ವಿವರಿಸಿದ ಸಚಿವರು, ‘ಈ ಹಿಂದೆ ಕುಲಪತಿ ನೇಮಕ ವಿಚಾರದಲ್ಲಿ ಅವಕಾಶ ಸೀಮಿತವಾಗಿತ್ತು. ಹೊಸದಾಗಿ ಸ್ಥಾಪಿತವಾದ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಲು ಅನುಕೂಲ ಕಲ್ಪಿಸಲು ಕಾಯ್ದೆಯ ಸೆಕ್ಷನ್ 14 ರಲ್ಲಿ ಬದಲಾವಣೆ ತರಲಾಗಿದೆ. ಅಲ್ಲದೆ, ಹಲವು ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳಲು ಅನುಕೂಲವಾಗುವ ಬದಲಾವಣೆ ತರಲಾಗಿದೆ’ ಎಂದರು.

ADVERTISEMENT

ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, 'ಕುಲಪತಿ ನೇಮಕಕ್ಕೆ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೇಮಿಸಬಾರದು. ಪ್ರಾಧ್ಯಾಪಕರಿಗೆ ಅವಕಾಶ ಸಿಕ್ಕರೆ ಶಿಕ್ಷಣ ಪ್ರಗತಿ ಸಾಧ್ಯ. ಹಣ ಹಾಗೂ ಜಾತಿ ಆಧಾರದ ಮೇಲೆ ಉಪಕುಲಪತಿಗಳ ನೇಮಕವಾದರೆ ಮಕ್ಕಳ ಭವಿಷ್ಯ ಬೆಳಗುವುದು ಹೇಗೆ: ಎಂದು ಪ್ರಶ್ನಿಸಿದರು. ಜೆಡಿಎಸ್‌ನ ಭೋಜೇಗೌಡ, 'ವಿಶ್ವವಿದ್ಯಾಲಯಗಳು ನಾಯಿ ಕೊಡೆಯಂತೆ ತಲೆ ಎತ್ತುತ್ತಿವೆ. ಸಿಬ್ಬಂದಿ ಕೊರತೆ ಇದೆ.ವಿಶ್ವವಿದ್ಯಾಲಯಗಳು ವ್ಯಾಪಾರೀಕರಣದ ಕೇಂದ್ರವಾಗಿವೆ. ರಾಜಕೀಯ ಪ್ರಭಾವಿ ನಾಯಕರ ಆಪ್ತರೇ ಇಲ್ಲಿನ ಆಯಕಟ್ಟಿನ ಸ್ಥಾನಗಳಲ್ಲಿದ್ದಾರೆ' ಎಂದರು.

ಬಿಜೆಪಿಯ ಎಸ್.ವಿ.ಸಂಕನೂರ, 'ಇದುವರೆಗೂ ಹಲವು ವಿಶ್ವವಿದ್ಯಾಲಯಗಳಲ್ಲಿ ದೂರಶಿಕ್ಷಣ ನಡೆಸುತ್ತಿದ್ದೆವು. ಇನ್ನು ಮುಂದೆ ಮುಕ್ತ ವಿಶ್ವವಿದ್ಯಾಲಯ ಹೊರತುಪಡಿಸಿ ಉಳಿದ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ಇಲ್ಲ. ದೂರಶಿಕ್ಷಣ ವ್ಯವಸ್ಥೆಯಿಂದ ಒಂದಿಷ್ಟು ಆದಾಯ ಬರುತ್ತಿತ್ತು. ಅದು ನಿಂತರೆ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟ’ ಎಂದು ಅಭಿಪ್ರಾಯಪಟ್ಟರು. ಚರ್ಚೆಯ ಬಳಿಕ ಮಸೂದೆಗೆ ಅಂಗೀಕಾರ ‌ನೀಡಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.