ಬೆಂಗಳೂರು: ಬೆಂಗಳೂರಿನಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಂಡು ರೈಲ್ವೆ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಸುಕಂತ ದಾಸ್ (36) ಬಂಧಿತ ಆರೋಪಿ.
‘ರೈಲ್ವೆ ನಿಲ್ದಾಣದ ಫ್ಲಾಟ್ಫಾರ್ಮ್ ಎರಡರಲ್ಲಿ ಈತ ಚೀಲಗಳನ್ನು ಹಿಡಿದು ನಿಂತಿದ್ದ. ಅನುಮಾನದಿಂದ ವಿಚಾರಣೆ ನಡೆಸಿದಾಗ ಚೀಲದಲ್ಲಿ ಮದ್ಯ ಬಾಟಲಿಗಳು ಪತ್ತೆಯಾದವು’ ಎಂದು ಪೊಲೀಸರು ತಿಳಿಸಿದರು.
‘ಆರೋಪಿ ಜಕ್ಕೂರಿನ ಮದ್ಯದಂಗಡಿಯಿಂದ ಮದ್ಯದ ಬಾಟಲಿಗಳನ್ನು ಖರೀದಿಸಿದ್ದ. ಲಾಕ್ಡೌನ್ನಿಂದಾಗಿ ಬೇಡಿಕೆ ಇರುವ ಕಾರಣಕ್ಕೆ ಕೇರಳದಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಯೋಜಿಸಿದ್ದ. ಇದಕ್ಕಾಗಿ ಬೆಂಗಳೂರಿನಿಂದ ತಿರುವನಂತಪುರಕ್ಕೆ ತೆರಳುವ ರೈಲು ಹತ್ತಲು ದಂಡು ನಿಲ್ದಾಣಕ್ಕೆ ಬಂದಿದ್ದ’ ಎಂದೂ ಹೇಳಿದರು.
‘ಆರೋಪಿಯಿಂದ ₹26,433 ಮೌಲ್ಯದ ಒಟ್ಟು 77 ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.