ಬೆಂಗಳೂರು: ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಖಲೀಮ್ ಉಲ್ಲಾ ಜಮಾಲ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ನಿರ್ದೇಶಿಸಿ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಖಲೀಲ್ ಉಲ್ಲಾ ಜಮಾಲ್, ಐಎಂಎ ಕಂಪನಿಯಿಂದ ವಸೂಲಿ ಮಾಡಿದ ಹಣದಲ್ಲಿ ಪತ್ನಿ ಹೆಸರಿಗೆ ಆಸ್ತಿ ಖರೀದಿಸಿದ ಆರೋಪ ಎದುರಿಸುತ್ತಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.