ADVERTISEMENT

ಟಿ20 ಕ್ರಿಕೆಟ್‌: ಹೆಚ್ಚುವರಿ ಬಸ್‌ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 15:49 IST
Last Updated 13 ಜನವರಿ 2024, 15:49 IST
<div class="paragraphs"><p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು</p></div>

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು

   

(ಸಂಗ್ರಹ ಚಿತ್ರ)

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜ.17ರಂದು ನಡೆಯಲಿರುವ ಭಾರತ ಮತ್ತು ಅಫ್ಗಾನಿಸ್ತಾನ ನಡುವಿನ ಟಿ20 ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಬರುವವರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲು ನಿರ್ಧರಿಸಿದೆ.

ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್‌ ರಸ್ತೆ ಮೂಲಕ ಕಾಡುಗೋಡಿಗೆ, ಹೂಡಿ ರಸ್ತೆ ಮೂಲಕ ಕಾಡುಗೋಡಿಗೆ, ದೊಮ್ಮಸಂದ್ರ ಮೂಲಕ ಸರ್ಜಾಪುರಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ಸ್‌ ಸಿಟಿ, ಜಯದೇವ ಆಸ್ಪತ್ರೆ ರಸ್ತೆ ಮೂಲಕ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ, ಯಶವಂತಪುರ ಮೂಲಕ ನೆಲಮಂಗಲ, ಹೆಬ್ಬಾಳ ಮೂಲಕ ಯಲಹಂಕ 5ನೇ ಹಂತ, ನಾಗವಾರ ಮೂಲಕ ಯಲಹಂಕ ಆರ್‌ಕೆ ಹೆಗಡೆ ನಗರ, ಹೆಣ್ಣೂರು ರಸ್ತೆ ಮೂಲಕ ಬಾಗಲೂರು, ಟಿನ್‌ ಫ್ಯಾಕ್ಟರಿ ಮೂಲಕ ಹೊಸಕೋಟೆಗೆ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.