ADVERTISEMENT

‘ಅಖಂಡ ಭಾರತ–ಕನಸು ನನಸು’

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2019, 19:47 IST
Last Updated 15 ಆಗಸ್ಟ್ 2019, 19:47 IST
ಶಾಸಕ ಅರವಿಂದ ಲಿಂಬಾವಳಿ ಗೌರವ ವಂದನೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಎನ್.ತೇಜಸ್ ಕುಮಾರ್ ಇದ್ದರು.
ಶಾಸಕ ಅರವಿಂದ ಲಿಂಬಾವಳಿ ಗೌರವ ವಂದನೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಎನ್.ತೇಜಸ್ ಕುಮಾರ್ ಇದ್ದರು.   

ಕೆ.ಆರ್.ಪುರ: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕೆಂದು ಅಂದಿನ ಪ್ರಧಾನಿ ವಿ.ಪಿ. ಸಿಂಗ್ ಕಂಡ ಕನಸು ಇಂದು ನನಸಾಗಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 73 ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ಬಿಜೆಪಿಯ ಚಿಂತನೆಗಳನ್ನು ಜಾರಿಗೊಳಿಸುವುದರ ಮೂಲಕ ಆಂತರಿಕ ಭದ್ರತೆ, ಉಗ್ರರ ನಿಗ್ರಹ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಭಾರಿ ಯಶಸ್ಸು ಸಾಧಿಸಿದ್ದೇವೆ’ ಎಂದರು.

ಸಮಿತಿ ಅಧ್ಯಕ್ಷ ಎನ್.ತೇಜಸ್ ಕುಮಾರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.