ADVERTISEMENT

ಸನ್ನಡತೆ: 81 ಕೈದಿಗಳ ಬಿಡುಗಡೆಗೆ ಆದೇಶಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 16:40 IST
Last Updated 14 ಆಗಸ್ಟ್ 2022, 16:40 IST
   

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 81 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳು ಜೈಲಿನಿಂದ ಹೊರಬರಲಿದ್ದಾರೆ.

‘ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 14 ಕೈದಿಗಳ ಬಿಡುಗಡೆಗೆ ಒಪ್ಪಿಗೆ ಸಿಕ್ಕಿದೆ. ಬೆಳಗಾವಿಯ 3, ಬಳ್ಳಾರಿಯ 8, ವಿಜಯಪುರ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ 10 (ಒಬ್ಬ ಮಹಿಳೆ) ಕೈದಿಗಳು ಸೋಮವಾರ ಬಿಡುಗಡೆಯಾಗಲಿದ್ದಾರೆ’ ಎಂದು ಕಾರಾಗೃಹ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT