ಬೆಂಗಳೂರು: ಇಂಡಿಯನ್ ಆಯಿಲ್ ಕಂಪನಿಯನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪುರಸ್ಕಾರ ಲಭಿಸಿರುವುದು ಸಂತಸದ ಸಂಗತಿ ಎಂದು ಕಂಪನಿ ಹೇಳಿದೆ.
‘ಭಾರತೀಯ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಹಾಗೂ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ, ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ರಾಜೀವ್ಗಾಂಧಿ ಖೇಲ್ ರತ್ನ ಪುರಸ್ಕಾರ ಸಂದಿದೆ. ಇವರು ನಮ್ಮ ಕಂಪನಿಯ ಉದ್ಯೋಗಿಗಳು ಎನ್ನುವುದು ಹೆಮ್ಮೆಯ ವಿಚಾರ. ಇಬ್ಬರನ್ನೂ ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ’ ಎಂದು ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ರಂಜನ್ ಕುಮಾರ್ ಮಹಾಪಾತ್ರ ಹೇಳಿದ್ದಾರೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿಗಮವು 150ಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಉದ್ಯೋಗ ನೀಡಿದೆ. ಸದ್ಯ, 90ಕ್ಕೂಹೆಚ್ಚು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.