ಬೆಂಗಳೂರು: ನಗರದ ಬಸವನಗುಡಿಯ ಎನ್.ಆರ್. ಕಾಲೋನಿಯ ಡಾ.ಸಿ. ಅಶ್ವತ್ಥ್ ಕಲಾ ಭವನದಲ್ಲಿ ಮೇ 29ರಂದು ‘ಇಂಡಿಯಾಸ್ ಸನ್ಸ್’ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.
ಮಧ್ಯಾಹ್ನ 3.30ಕ್ಕೆ ಮತ್ತು ಸಂಜೆ 7ಕ್ಕೆ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ದೀಪಿಕಾ ನಾರಾಯಣ ಭಾರದ್ವಾಜ್ ಮತ್ತು ನೀರಜಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದಾರೆ.
ಅತ್ಯಾಚಾರ ಕಾನೂನುಗಳ ದುರುಪಯೋಗದ ಕುರಿತು ನೈಜಚಿತ್ರಣವನ್ನು ಈ ಸಾಕ್ಷ್ಯಚಿತ್ರ ಬಿಂಬಿಸಿದೆ ಎಂದು ದೀಪಿಕಾ ಭಾರದ್ವಾಜ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.