ADVERTISEMENT

ಒಳರೋಗಿಗಳು ಬೇರೆಡೆಗೆ ಸ್ಥಳಾಂತರ: ಚಿಕಿತ್ಸೆಗೆ ಸಜ್ಜಾಗುತ್ತಿದೆ ವಿಕ್ಟೋರಿಯಾ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 2:29 IST
Last Updated 27 ಮಾರ್ಚ್ 2020, 2:29 IST
ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಜ್ಜಾಗುತ್ತಿದೆ ವಿಕ್ಟೋರಿಯಾ ಆಸ್ಪತ್ರೆ
ಕೊರೊನಾ ಸೋಂಕಿತರ ಚಿಕಿತ್ಸೆಗೆ ಸಜ್ಜಾಗುತ್ತಿದೆ ವಿಕ್ಟೋರಿಯಾ ಆಸ್ಪತ್ರೆ   

ಬೆಂಗಳೂರು: ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರಿಗೆ ಚಿಕಿತ್ಸೆ ನೀಡಲುವಿಕ್ಟೋರಿಯಾಆಸ್ಪತ್ರೆ ಸಜ್ಜುಗೊಳ್ಳುತ್ತಿದ್ದು, ಅಲ್ಲಿನ ಒಳರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.

ಕೋವಿಡ್‌–19 ರೋಗಿಗಳು ಹಾಗೂ ಸೂಂಕು ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿಕೋವಿಡ್‌–19 ಕಾರ್ಯಪಡೆಯುವಿಕ್ಟೋರಿಯಾಆಸ್ಪತ್ರೆಯನ್ನು ಮೀಸಲಿಡುವಂತೆ ಸೂಚಿಸಿತ್ತು. ಸದ್ಯ ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ರೀತಿ ವಿವಿಧ ಆಸ್ಪತ್ರೆಗಳಲ್ಲಿ ಅವರನ್ನು ದಾಖಲಿಸಿಕೊಂಡಲ್ಲಿಚಿಕಿತ್ಸೆಗೆಸಮಸ್ಯೆಯಾಗುವ ಸಾಧ್ಯತೆಯಿದೆ. ಹಾಗಾಗಿ ಸೋಂಕು ನಿಗ್ರಹ ಮಾಡುವ ನಿಟ್ಟಿನಲ್ಲಿ 1,700 ಹಾಸಿಗೆಗಳ ಸಾಮರ್ಥ್ಯ ಹೊಂದಿರುವವಿಕ್ಟೋರಿಯಾಆಸ್ಪತ್ರೆಯನ್ನು ಕೋವಿಡ್‌–19 ರೋಗಿಗಳಿಗಾಗಿಯೇ ವಿಶೇಷ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತಿದೆ.

ವಿಕ್ಟೋರಿಯಾದಲ್ಲಿಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೆ.ಸಿ.ಜನರಲ್, ಜಯನಗರ ಸಾರ್ವಜನಿಕ ಆಸ್ಪತ್ರೆ, ಕಿಮ್ಸ್‌ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ. ಆಸ್ಪತ್ರೆಯ ವೈದ್ಯರಿಗೂಚಿಕಿತ್ಸೆಗೆಸನ್ನದವಾಗಿರುವಂತೆ ಸೂಚಿಸಲಾಗಿದೆ.ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರುವಿಕ್ಟೋರಿಯಾಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ‌ಪ್ರಸ್ತುತ ಆಸ್ಪತ್ರೆಯಲ್ಲಿ ಮೂರು ತುರ್ತುನಿಗಾ ಘಟಕಗಳಿವೆ. ಸದ್ಯ 100 ವೆಂಟಿಲೇಟರ್‌ಗಳಿದ್ದು, ಇದರ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ.

ADVERTISEMENT

‘ಒಳರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಕೋವಿಡ್‌–19 ರೋಗಕ್ಕೆ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.ಚಿಕಿತ್ಸೆಗೆಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ’ ಎಂದುವಿಕ್ಟೋರಿಯಾಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದರು.

ಚಿಕಿತ್ಸೆಗೆಬರುವವರಲ್ಲಿ ಆತಂಕ:ವಿಕ್ಟೋರಿಯಾಆವರಣದಲ್ಲಿ ವಾಣಿವಿಲಾಸ ಆಸ್ಪತ್ರೆ, ಎಮರ್ಜೆನ್ಸಿ ಟ್ರಾಮಾ ಸೆಂಟರ್, ನೆಫ್ರೋ ಯುರಾಲಜಿ ಸಂಸ್ಥೆ, ಮಿಂಟೊ ಆಸ್ಪತ್ರೆ ಸೇವೆ ನೀಡುತ್ತಿವೆ. ಈ ಆಸ್ಪತ್ರೆಗಳಿಗೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ವಿಕ್ಟೋರಿಯಾಕ್ಕೆ ಹೊಂದಿಕೊಂಡೇ ಇರುವುದರಿಂದ ಅಲ್ಲಿಗೆ ಬರುವವರಿಗೆ ಸುರಕ್ಷತೆಯ ಭೀತಿ ಕಾಡುವ ಸಾಧ್ಯತೆ ಇದೆ.

ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕೆಂದು ವಿವಿಧ ಆಸ್ಪತ್ರೆಗಳ ನಿರ್ದೇಶಕರುಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ
ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಡೀನ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಡೀನ್ ಡಾ.ಜಯಂತಿಪ್ರತಿಕ್ರಿಯೆಗೆ
ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.