ಬೆಂಗಳೂರು: ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲೆಂದು ಶ್ರಮಿಸುತ್ತಿರುವಪೊಲೀಸ್ ಸಿಬ್ಬಂದಿಗೂ ವಿಮೆ ಹಾಗೂ ತುಟ್ಟಿ ಭತ್ಯೆ ಸೌಲಭ್ಯ ಸಿಗಲಿದೆ ಎಂದುರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಪೊಲೀಸರು, ಗೃಹ ರಕ್ಷಕ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ, ಪೌರ ರಕ್ಷಣಾ ದಳದ ಸಿಬ್ಬಂದಿ ಹಾಗೂ ಕಾರಾಗೃಹ ಸಿಬ್ಬಂದಿಗೂ ಸೌಲಭ್ಯ ಸಿಗಲಿದೆ’ ಎಂದಿದ್ದಾರೆ.
‘ಕೋವಿಡ್–19 ನಿಯಂತ್ರಣಕ್ಕಾಗಿಹೋರಾಡುತ್ತಿರುವವೈದ್ಯಕೀಯ ಸಿಬ್ಬಂದಿಗೆ ಸಿಗುವ ಸೌಲಭ್ಯಗಳಮಾದರಿಯಲ್ಲೇ ಪೊಲೀಸ್ ಸಿಬ್ಬಂದಿಗೂ ಈ ಸೌಲಭ್ಯ ಸಿಗಲಿದೆ. ಈ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದೂ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.