ಸಾಂದರ್ಭಿಕ ಚಿತ್ರ
ಬೆಂಗಳೂರು: ಆರ್ಆರ್ಬಿ ಐಬಿಪಿಎಸ್ (ಪಿಒ/ಎಸ್ಒ) ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ಅಭ್ಯರ್ಥಿಗಳಿಗೆ ಮೌಖಿಕ ಪರೀಕ್ಷೆಗಾಗಿ ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಹಮ್ಮಿಕೊಳ್ಳಲಾಗಿದೆ.
ಫೆ.23ರಂದು ಬೆಳಿಗ್ಗೆ 11.30ರಿಂದ ತರಬೇತಿ ನಡೆಯಲಿದೆ. ಆಸಕ್ತರು ಫೆ.22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.
ವಿವರಗಳಿಗೆ ನಂ.15, 2ನೇ ಹಂತ, ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್ ಅವೆನ್ಯೂ ರಸ್ತೆ, ಕೋಡಿಹಳ್ಳಿ ಬೆಂಗಳೂರು ಇಲ್ಲಿಗೆ ಸಂಪರ್ಕಿಸಬಹುದು. ಅಥವಾ ವೆಬ್ಸೈಟ್: www.Ksfkarnataka.com, ಇ–ಮೇಲ್: Ksfbangalore@gmail.com, ದೂರವಾಣಿ: 080 25202299, 7625000990 ಸಂಪರ್ಕಿಸುವಂತೆ ಫೌಂಡೇಶನ್ನ ಗೌರವ ಕಾರ್ಯದರ್ಶಿ ಟಿ. ತಿಮ್ಮೇಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.