ADVERTISEMENT

ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 18:54 IST
Last Updated 21 ನವೆಂಬರ್ 2022, 18:54 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತನ್ನ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ, ಲೇಖನ, ಸುದ್ದಿ, ಛಾಯಾಚಿತ್ರಗಳನ್ನು ಆಹ್ವಾನಿಸಿದೆ.

ಅತ್ಯುತ್ತಮ ಕ್ರೀಡಾ ವರದಿಗೆ ನೀಡುವ ಕೆ.ಎ. ನೆಟ್ಟಕಲ್ಲಪ್ಪ ಪ್ರಶಸ್ತಿ, ವಿಮರ್ಶಾ ತ್ಮಕ ಲೇಖನಕ್ಕೆ ನೀಡುವ ಖಾದ್ರಿ ಶಾಮಣ್ಣ ಪ್ರಶಸ್ತಿ ಸೇರಿ 21 ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

2020ರ ಜನವರಿಯಿಂದ ಡಿಸೆಂಬರ್ ಒಳಗೆ ಪ್ರಕಟವಾದ ಲೇಖನ ಗಳನ್ನು ಕಳುಹಿಸ ಬಹುದು.ಅನುವಾದಿತ ಲೇಖನಗಳಿಗೆ ಅವಕಾಶ ಇಲ್ಲ. ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾ ರಿಗಳು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯುನ್ಮಾನ ಮಾಧ್ಯಮದ ಪ್ರಶಸ್ತಿಗಳಿಗೆ ಕ್ಲಿಪಿಂಗ್‌, ಸಿ.ಡಿ ಅಥವಾ ಪೆನ್‌ಡ್ರೈವ್‌, ಸ್ಕ್ರಿಪ್ಟ್‌ ಕಳುಹಿಸಬೇಕು. ಅರ್ಜಿಗಳನ್ನುಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಂದಾಯ ಭವನ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-90 ಈ ವಿಳಾಸಕ್ಕೆ ನ.28ರ ಒಳಗೆ ಕಳುಹಿಸಬಹುದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.