ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಸೋಮವಾರ ವರ್ಗಾವಣೆ ಮಾಡಿದೆ.
ರಾಮ ನಿವಾಸ್ ಸೆಪಟ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿಯಾಗಿ, ಅಭಿನವ್ ಖರೆ ಅವರನ್ನು ಬಾಗಲಕೋಟೆ ಜಿಲ್ಲೆ ಎಸ್ಪಿಯಾಗಿ ಮತ್ತು ಲಕ್ಷ್ಮಣ್ ನಿಂಬರಗಿ ಅವರನ್ನು ಬಳ್ಳಾರಿ ಜಿಲ್ಲೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಲ್ಲದೇ,13 ಡಿವೈಎಸ್ಪಿಗಳು ಮತ್ತು 50 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.