ಬೆಂಗಳೂರು: ಕಳೆದ ವರ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ವರ್ಷ ಮತ್ತೊಬ್ಬ ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಸಹ ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ.
ರಾಜ್ಯ ಪೊಲೀಸ್ ಗಣಕ ವಿಭಾಗದ ಎಡಿಜಿಪಿ ಆಗಿರುವ ಸಹಾಯ್, ಸ್ವಯಂ ನಿವೃತ್ತಿ ಕೋರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಬಗ್ಗೆ ಆಪ್ತ ವಲಯದಲ್ಲಿ ಚರ್ಚೆ ನಡೆದಿದೆ.
‘1989ರ ಬ್ಯಾಚ್ ಅಧಿಕಾರಿಯಾದ ಸಹಾಯ್ ಅವರ ಸೇವಾವಧಿ ಐದು ವರ್ಷವಿತ್ತು. ನಿವೃತ್ತಿ ಪಡೆಯಲು ಕಾರಣವೇನು ಎಂಬುದು ಗೊತ್ತಾಗಿಲ್ಲ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯೆಗೆ ಸಹಾಯ್ ಲಭ್ಯರಾಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.