ಬೆಂಗಳೂರು: ಇಸ್ಕಾನ್ ದೇಗುಲದಲ್ಲಿ ಆಗಸ್ಟ್ 29 ಮತ್ತು 30ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದು ಇಸ್ಕಾನ್ ತಿಳಿಸಿದೆ.
ಜನರ ಸುರಕ್ಷತೆ ಮತ್ತು ಸರ್ಕಾರದ ನಿಯಮಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಬ್ಬದ ವೇಳಾಪಟ್ಟಿಯಂತೆ ಎಲ್ಲ ಸೇವೆಗಳನ್ನೂ ದೇವರಿಗೆ ಅರ್ಪಿಸಲಾಗುವುದು.
ಭಕ್ತರು ಆನ್ಲೈನ್ (www.iskconbangalore.org) ಮೂಲಕ ಎಲ್ಲವನ್ನೂ ವೀಕ್ಷಿಸಬಹುದು ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.