ADVERTISEMENT

ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 6:56 IST
Last Updated 14 ಜೂನ್ 2022, 6:56 IST
ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ- ಲೈವ್‌ ವಿಡಿಯೊದ ಸ್ಕ್ರೀನ್‌ ಶಾಟ್‌
ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ- ಲೈವ್‌ ವಿಡಿಯೊದ ಸ್ಕ್ರೀನ್‌ ಶಾಟ್‌   

ಬೆಂಗಳೂರು: ಇಸ್ಕಾನ್‌ನ ನೂತನ ರಾಜಾಧಿರಾಜ ಗೋವಿಂದ ದೇವಾಲಯ ಹಾಗೂ ಸಾಂಸ್ಕೃತಿಕ ಸಂಕೀರ್ಣ ಕಟ್ಟಡವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಉದ್ಘಾಟಿಸಿದರು.

ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಪ್ರವೇಶಿಸಿದ ರಾಷ್ಟ್ರಪತಿ, ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಜೊತೆಗಿದ್ದರು.

ದರ್ಶನ ನಂತರ, ದೇವಾಲಯ ಆವರಣದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ADVERTISEMENT

'ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದೆ. ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ‌ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ' ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಹೇಳಿದರು.

'ದೇಶದ ವಿವಿಧ ಭಾಗಗಳ ಭಕ್ತರ ಭಕ್ತಿಯ ಕ್ಷೇತ್ರ ಇದಾಗಲಿದೆ. ನಿತ್ಯವೂ ಉಚಿತ ಊಟ ಇರಲಿದೆ' ಎಂದೂ ತಿಳಿಸಿದರು‌.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.