ADVERTISEMENT

ಬಿಜೆಪಿ ನಾಯಕರ ಆಪ್ತನ ಮನೆಯಲ್ಲಿ ಐ.ಟಿ ಶೋಧ

​ಪ್ರಜಾವಾಣಿ ವಾರ್ತೆ
Published 6 ಮೇ 2023, 21:10 IST
Last Updated 6 ಮೇ 2023, 21:10 IST
Income tax
Income tax   

ಬೆಂಗಳೂರು: ಕಮ್ಮವಾರಿ ಸಂಘದ ಅಧ್ಯಕ್ಷ ರಾಜಗೋಪಾಲ್ ನಾಯ್ಡು ಮನೆ ಮೇಲೆ ಶನಿವಾರ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ.) ಇಲಾಖೆ ಅಧಿಕಾರಿ, ಶೋಧ ನಡೆಸುತ್ತಿದ್ದಾರೆ.

ಬಸವನಗುಡಿಯಲ್ಲಿರುವ ನಾಯ್ಡು ಮನೆ ಮೇಲೆ ಶನಿವಾರ ಬೆಳಿಗ್ಗೆ 15ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿಮಾಡಿದೆ. ತಡ ರಾತ್ರಿಯವರೆಗೂ ಶೋಧ ಮುಂದುವರಿದಿತ್ತು. ‘ರಾಜ ಗೋಪಾಲ್ ನಾಯ್ಡು ಬಸವನಗುಡಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಮುಖ ನಾಯಕರಿಗೆ ಆಪ್ತರಾಗಿ
ದ್ದಾರೆ. ವಿಧಾನಸಭಾ ಚುನಾ ವಣೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇಲೆ ದಾಳಿ‌ ನಡೆಸಲಾಗಿದೆ. ಶೋಧ ಕಾರ್ಯ ಪ್ರಗತಿಯಲ್ಲಿದೆ' ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT