ADVERTISEMENT

‘ಜೈನ್‌ ಸಮೂಹದಿಂದ ಐತಿಹಾಸಿಕ ಕಲ್ಲುಕಟ್ಟಡ ನವೀಕರಣ’

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 15:39 IST
Last Updated 17 ಜುಲೈ 2021, 15:39 IST
ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಜೈನ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಚೆನ್‌ರಾಜ್‌ ರಾಯ್‌ಚಂದ್‌ ಹಾಗೂ ಅಧಿಕಾರಿಗಳ ಜೊತೆ ಸಮಾಲೋಚಿಸಿದರು
ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಜೈನ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಚೆನ್‌ರಾಜ್‌ ರಾಯ್‌ಚಂದ್‌ ಹಾಗೂ ಅಧಿಕಾರಿಗಳ ಜೊತೆ ಸಮಾಲೋಚಿಸಿದರು   

ಬೆಂಗಳೂರು: ‘ಮಲ್ಲೇಶ್ವರದ 18ನೇ ತಿರುವಿನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಐತಿಹಾಸಿಕ ಕಲ್ಲುಕಟ್ಟಡ ನವೀಕರಿಸುವ ಜವಾಬ್ದಾರಿಯನ್ನು ಜೈನ್‌ ಸಮೂಹ ವಹಿಸಿಕೊಂಡಿದೆ. ಇದು ಖುಷಿಯ ವಿಷಯ’ ಎಂದು ಮಲ್ಲೇಶ್ವರದ ಶಾಸಕರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಶನಿವಾರ ತಿಳಿಸಿದರು.

ಜೈನ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಚೆನ್‌ರಾಜ್‌ ರಾಯ್‌ಚಂದ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಕಟ್ಟಡ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

‘ಈ ಕಟ್ಟಡ ನಾಡಿನ ಹೆಮ್ಮೆ. ಇದನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ. ಈ ಕಟ್ಟಡ ಹಾಗೂ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಆರ್‌.ಸಿ.ಕಾಲೇಜಿನ ಕಟ್ಟಡ ನವೀಕರಿಸಲು ನೆರವಾಗುವಂತೆ ಕೇಳಿಕೊಂಡಿದ್ದೆ. ಅದಕ್ಕೆ ಜೈನ್‌ ಸಮೂಹದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕಟ್ಟಡಗಳು ಪರಂಪರೆಯ ಹೆಗ್ಗುರುತು. ಇವುಗಳನ್ನು ಇನ್ನಷ್ಟು ಕಾಲ ಉಳಿಸಿಕೊಳ್ಳಬೇಕಿದೆ. ನವೀಕರಣದ ಸಂಪೂರ್ಣ ವೆಚ್ಚವನ್ನು ಜೈನ್‌ ಸಮೂಹದವರೇ ಭರಿಸಲಿದ್ದಾರೆ. ಇದು ಸ್ವಾಗತಾರ್ಹ ನಡೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.