ADVERTISEMENT

ಮಾದಿಗ ಸಮುದಾಯಕ್ಕೆ ರಾಜಕೀಯ ಅವಕಾಶ ಬೇಕು: ಎಲ್.ಹನುಮಂತಯ್ಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 16:58 IST
Last Updated 17 ಫೆಬ್ರುವರಿ 2022, 16:58 IST
ಸಭೆಯಲ್ಲಿ ಎಲ್.ಹನುಮಂತಯ್ಯ ಮಾತನಾಡಿದರು. ಎನ್. ಕೃಷ್ಣಮೂರ್ತಿ, ಡಾ. ತಿಮ್ಮಯ್ಯ, ಆರ್.ಬಿ. ತಿಮ್ಮಾಪುರ ಇದ್ದರು –ಪ್ರಜಾವಾಣಿ ಚಿತ್ರ
ಸಭೆಯಲ್ಲಿ ಎಲ್.ಹನುಮಂತಯ್ಯ ಮಾತನಾಡಿದರು. ಎನ್. ಕೃಷ್ಣಮೂರ್ತಿ, ಡಾ. ತಿಮ್ಮಯ್ಯ, ಆರ್.ಬಿ. ತಿಮ್ಮಾಪುರ ಇದ್ದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಬಿಬಿಎಂಪಿ ಸೇರಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮ ವಹಿಸಬೇಕು ಎಂದು ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು.

ಜಾಂಬವ ಜಾಗೃತಿ ವೇದಿಕೆ ಆಯೋಜಿಸಿದ್ದ ‘ಮಾದಿಗ ಸಮುದಾಯದ ಮುಂದಿನ ರಾಜಕೀಯ ನಡೆ’ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ‌‘ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಮುದಾಯದವರು ಹೆಚ್ಚಾಗಿ ಸ್ಪರ್ಧಿಸಬೇಕು. ಅದಕ್ಕೆ ಅಗತ್ಯ ಇರುವ ಅವಕಾಶಗಳನ್ನು ಎಲ್ಲರೂ ಸೇರಿ ಕೊಡಿಸಬೇಕು. ಆಯಾ ಕ್ಷೇತ್ರದ ಶಾಸಕರು ಮತ್ತು ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಗೆಲ್ಲಿಸಲು ಮುಂದಾಗಬೇಕು’ ಎಂದು ಹೇಳಿದರು.

ವಿಧಾನ ಪರಿಷತ್ತಿನ ಸದಸ್ಯ ಆರ್.ಬಿ. ತಿಮ್ಮಾಪುರ, ‘ರಾಜಕೀಯ ಅಧಿಕಾರ ಪಡೆದುಕೊಳ್ಳಲು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿದರು.

ADVERTISEMENT

ವಿಧಾನ ಪರಿಷತ್‌ ಸದಸ್ಯ ಡಾ.ತಿಮ್ಮಯ್ಯ, ಮುಖಂಡರಾದ ಆರ್.ಧರ್ಮಸೇನಾ, ಜಿ.ಎಸ್. ಮಂಜುನಾಥ್, ಬಲದೇವಕೃಷ್ಣ, ವೇದಿಕೆ ಅಧ್ಯಕ್ಷ ಎನ್.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್, ಕಾರ್ಯದರ್ಶಿ ನರಸಿಂಹಮೂರ್ತಿ ಪಾಲ್ಗೊಂಡಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.