ADVERTISEMENT

ಗೋವಿಂದರಾಜನಗರದಲ್ಲಿ ಜನಸ್ಪಂದನಾ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 21:30 IST
Last Updated 16 ಡಿಸೆಂಬರ್ 2020, 21:30 IST
ಬಾಲಗಂಗಾಧರನಾಥ ಸ್ವಾಮೀಜಿಯವರ ಕಂಚಿನ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಸೌಮ್ಯನಾಥ ಸ್ವಾಮೀಜಿ, ವಿ. ಸೋಮಣ್ಣ, ಉಮೇಶ್‌ ಶೆಟ್ಟಿ ಇತರರು ಇದ್ದಾರೆ
ಬಾಲಗಂಗಾಧರನಾಥ ಸ್ವಾಮೀಜಿಯವರ ಕಂಚಿನ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಸೌಮ್ಯನಾಥ ಸ್ವಾಮೀಜಿ, ವಿ. ಸೋಮಣ್ಣ, ಉಮೇಶ್‌ ಶೆಟ್ಟಿ ಇತರರು ಇದ್ದಾರೆ   

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಚಿವ ವಿ. ಸೋಮಣ್ಣ ಜನಸ್ಪಂದನಾ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.

‘ಬಾಲಗಂಗಾಧರನಾಥ ಸ್ವಾಮೀಜಿಯವರ ಹಳೆಯ ಪ್ರತಿಮೆ ತೆರವುಗೊಳಿಸಿ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಟ್ಟಿ ಮಾರಮ್ಮ ದೇವಸ್ಥಾನವನ್ನು ನವೀಕರಣಗೊಳಿಸಲಾಗುತ್ತಿದೆ’ ಎಂದು ಸೋಮಣ್ಣ ಹೇಳಿದರು.

ನಾಗರಭಾವಿ ಮುಖ್ಯರಸ್ತೆ ಮತ್ತು ಪ್ರಶಾಂತ ನಗರ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಅವರು, ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದರು.

ADVERTISEMENT

ಗೋವಿಂದರಾಜ ನಗರ ವಾರ್ಡ್‌ನ ಕೆಲವು ಹೋಟೆಲುಗಳಲ್ಲಿ ಸಾರ್ವಜನಿಕರ ಜೊತೆ ಕಾಫಿ ಸವಿಯುತ್ತ ಅವರ ಸಮಸ್ಯೆಗಳನ್ನು ಆಲಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಪಕ್ಷದ ಸ್ಥಳೀಯ ಮುಖಂಡರಾದ ಕೆ. ಉಮೇಶ್‌ ಶೆಟ್ಟಿ, ವಿಶ್ವನಾಥಗೌಡ, ಉಮಾಶಂಕರ್, ರಮೇಶ್, ರಾಮಚಂದ್ರ, ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.