ವೈ.ಎಸ್.ವಿ.ದತ್ತ
ಬೆಂಗಳೂರು: ಭಾರತ ಯಾತ್ರಾ ಕೇಂದ್ರ ನೀಡುವ ‘ಲೋಕಮಾನ್ಯ ಜಯಪ್ರಕಾಶ್ ನಾರಾಯಣ ಪ್ರಶಸ್ತಿ’ಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಬಿ.ಎಲ್.ಶಂಕರ್ ಮತ್ತು ಬಿ.ಆರ್.ಪಾಟೀಲ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಲೋಕಮಾನ್ಯ ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಅ.10ರಂದು ಸಂಜೆ 5 ಗಂಟೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರದ ಕಾರ್ಯದರ್ಶಿ ಕೆ.ವಿ.ನಾಗರಾಜಮೂರ್ತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.