ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮೊಂದಿಗೆ ಮಾತನಾಡಿಲ್ಲ ಎಂದು ದೂರಿದ ಕಾರ್ಯಕರ್ತರು, ಅವರ ಸಮ್ಮುಖದಲ್ಲೇ ಕೂಗಾಟ, ನೂಕಾಟ ನಡೆಸಿ ವಾಗ್ಯುದ್ದಕ್ಕಿಳಿದ ಪ್ರಸಂಗ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆಯಿತು.
ದಾವಣಗೆರೆ, ಚಿತ್ರದುರ್ಗ ಮತ್ತು ಹೊಳಲ್ಕೆರೆ ಭಾಗದ ಕಾರ್ಯಕರ್ತರ ಸಭೆ ನಡೆಯುತ್ತಿತ್ತು. ದೇವೇಗೌಡರನ್ನು ಮಾತನಾಡಿಸಲು ಹಲವು ಕಾರ್ಯಕರ್ತರು ಬಯಸಿದ್ದರು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ.
ದೇವೇಗೌಡರು ಮಾಧ್ಯಮದವರ ಬಳಿಗೆ ಹೋಗುತ್ತಿದ್ದಂತೆಯೇ ಕಾರ್ಯಕರ್ತರು ಪರಸ್ಪರ ತಳ್ಳಾಟ, ಕೂಗಾಟಕ್ಕೆ ತೊಡಗಿದರು. ಆದರೆ ಕ್ಯಾಮೆರಾ ಕಣ್ಣುಗಳು ತಮ್ಮನ್ನು ಸೆರೆ ಹಿಡಿಯುತ್ತಿವೆ ಎಂಬ ಅರಿವಾದೊಡನೆ ಅವರೆಲ್ಲರೂ ಸಿಟ್ಟನ್ನು ಬದಿಗಿಟ್ಟು, ಮುಖದಲ್ಲಿ ನಗು ತರಿಸಿಕೊಂಡರು. ಈ ಮಧ್ಯೆ, ಅನರ್ಹ ಶಾಸಕ ಕೆ.ಗೋಪಾಲಯ್ಯ ಪ್ರತಿನಿಧಿಸಿದ್ದಮಹಾಲಕ್ಷ್ಮಿ ಲೇಔಟ್ ಕ್ಷೇತ್ರವನ್ನುಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಆರಂಭವಾಗಿದ್ದು, ಗುರುವಾರ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.